Cover

Tipu Sultan kanda Kanasu

ಗಿರೀಶ ಕಾರ್ನಾಡ

Onverkort 9789354340659
1 uur 52 minuten
Sommige artikelen bevatten affiliate links (gemarkeerd met een sterretje *). Als je op deze links klikt en producten koopt, ontvangen we een kleine commissie zonder extra kosten voor jou. Uw steun helpt ons deze site draaiende te houden en nuttige inhoud te blijven maken. Hartelijk dank voor uw steun!

Van de uitgever

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಟಿಪೂ ಕನಸುಗಾರ ದೊರೆ. ಅವನು ತಾನು ಕಂಡ ಕನಸುಗಳನ್ನು ಟಿಪ್ಪಣಿ ರೂಪದಲ್ಲಿ ಬರೆದಿಟ್ಟಿ‌ದ್ದ, ಅದು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ.ಭಾರತಕ್ಕೆ ಸ್ವಾತಂತ್ರ್ಯ ದೊರೆತ ಸ್ವರ್ಣ ಮಹೋತ್ಸವ ವರ್ಷದಲ್ಲಿ ಬಿಬಿಸಿಯು ಗಿರೀಶರಿಗೆ ನಾಟಕ ಬರೆಯುವಂತೆ ಕೋರಿದಾಗ ಅವರು ಟಿಪೂವನ್ನು ವಸ್ತುವಾಗಿ ಆಯ್ಕೆ ಮಾಡಿಕೊಂಡರು. ಟಿಪೂವಿನ ಕನಸುಗಳನ್ನು ನಾಟಕವಾಗಿಸಿದರು. ಓದು ಕೃತಿಯಾಗಿ ಯಶಸ್ವಿಯಾದ ಈ ನಾಟಕ ರಂಗದ ಮೇಲೆಯೂ ಮುಖ್ಯವಾಗಿತ್ತು.ಗಿರೀಶ ಕಾರ್ನಾಡ್ ಅವರ ನಾಟಕ 'ಟಿಪ್ಪು ಸುಲ್ತಾನ್ ಕಂಡ ಕನಸು' - 1997ರಲ್ಲಿ ಭಾರತೀಯ ಸ್ವಾತಂತ್ರ್ಯಕ್ಕೆ ಐವತ್ತು ತುಂಬಿದ ಸಂದರ್ಭದಲ್ಲಿ ಇಂಗ್ಲೆಂಡಿನ ಬಿ.ಬಿ.ಸಿ ರೇಡಿಯೋದವರು ಗಿರೀಶ್ ಕಾರ್ನಾಡ್ ಅವರಿಗೆ ಸ್ವಾತಂತ್ರ್ಯದ ದಿನ ಬಿತ್ತರಿಸಲು ಒಂದು ನಾಟಕ ಬರೆದುಕೊಡಲು ಕೇಳಿದ ಕಾರಣಕ್ಕಾಗಿ ಕಾರ್ನಾಡ್ ಅವರು ಬರೆದ ನಾಟಕವಿದು.ನಾಟಕದ ವಸ್ತು ಆಂಗ್ಲ-ಭಾರತೀಯ ಸಂಬಂಧವನ್ನು ಕುರಿತದ್ದಾಗಿರಬೇಕು ಎಂಬ ಮಾತನ್ನು ಸೂಚ್ಯವಾಗಿ ಬಂದಾಗ ನನಗೆ ಕೂಡಲೇ ಹೊಳೆದದ್ದು ಕರ್ನಾಟಕದ ಕೊನೆಯ ಸ್ವತಂತ್ರ ಶಾಸಕನಾದ ಟಿಪೂ ಸುಲ್ತಾನನ ದುರಂತ ಎಂದು ಗಿರೀಶ್ ಕಾರ್ನಾಡ್ ಹೇಳುತ್ತಾರೆ. ತನ್ನ ಇಡೀ ಬಾಳನ್ನು ಬಡಿದಾಟದಲ್ಲೇ ನೀಗಿಸಿದ ಈ ವ್ಯಕ್ತಿ ಗುಟ್ಟಾಗಿ ತನ್ನ ಕನಸುಗಳನ್ನು ಬರೆದಿಡುತ್ತಿದ್ದ ಎಂಬ ಮಾತನ್ನು ಏ.ಕೆ.ರಾಮಾನುಜನ್ ಅವರಿಂದ ಕೇಳಿದಂದಿನಿಂದ ನನಗೆ ಟಿಪೂವಿನಿನಲ್ಲಿ ವಿಶೇಷ ಆಸಕ್ತಿ ಉಂಟಾಗಿತ್ತು ಎನ್ನುತ್ತಾರೆ ಕಾರ್ನಾಡ್. ಅದೇ ಈ ನಾಟಕದ ಆರಂಭ ಬಿಂದು ಎಂಬುದು ಅವರ ಅಭಿಪ್ರಾಯ.
Van de uitgever
ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಟಿಪೂ ಕನಸುಗಾರ ದೊರೆ. ಅವನು ತಾನು ಕಂಡ ಕನಸುಗಳನ್ನು ಟಿಪ್ಪಣಿ ರೂಪದಲ್ಲಿ ಬರೆದಿಟ್ಟಿ‌ದ್ದ, ಅದು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ.ಭಾರತಕ್ಕೆ ಸ್ವಾತಂತ್ರ್ಯ ದೊರೆತ ಸ್ವರ್ಣ ಮಹೋತ್ಸವ ವರ್ಷದಲ್ಲಿ ಬಿಬಿಸಿಯು ಗಿರೀಶರಿಗೆ ನಾಟಕ ಬರೆಯುವಂತೆ ಕೋರಿದಾಗ ಅವರು ಟಿಪೂವನ್ನು ವಸ್ತುವಾಗಿ ಆಯ್ಕೆ ಮಾಡಿಕೊಂಡರು. ಟಿಪೂವಿನ ಕನಸುಗಳನ್ನು ನಾಟಕವಾಗಿಸಿದರು. ಓದು ಕೃತಿಯಾಗಿ ಯಶಸ್ವಿಯಾದ ಈ ನಾಟಕ ರಂಗದ ಮೇಲೆಯೂ ಮುಖ್ಯವಾಗಿತ್ತು.ಗಿರೀಶ ಕಾರ್ನಾಡ್ ಅವರ ನಾಟಕ 'ಟಿಪ್ಪು ಸುಲ್ತಾನ್ ಕಂಡ ಕನಸು' - 1997ರಲ್ಲಿ ಭಾರತೀಯ ಸ್ವಾತಂತ್ರ್ಯಕ್ಕೆ ಐವತ್ತು ತುಂಬಿದ ಸಂದರ್ಭದಲ್ಲಿ ಇಂಗ್ಲೆಂಡಿನ ಬಿ.ಬಿ.ಸಿ ರೇಡಿಯೋದವರು ಗಿರೀಶ್ ಕಾರ್ನಾಡ್ ಅವರಿಗೆ ಸ್ವಾತಂತ್ರ್ಯದ ದಿನ ಬಿತ್ತರಿಸಲು ಒಂದು ನಾಟಕ ಬರೆದುಕೊಡಲು ಕೇಳಿದ ಕಾರಣಕ್ಕಾಗಿ ಕಾರ್ನಾಡ್ ಅವರು ಬರೆದ ನಾಟಕವಿದು.ನಾಟಕದ ವಸ್ತು ಆಂಗ್ಲ-ಭಾರತೀಯ ಸಂಬಂಧವನ್ನು ಕುರಿತದ್ದಾಗಿರಬೇಕು ಎಂಬ ಮಾತನ್ನು ಸೂಚ್ಯವಾಗಿ ಬಂದಾಗ ನನಗೆ ಕೂಡಲೇ ಹೊಳೆದದ್ದು ಕರ್ನಾಟಕದ ಕೊನೆಯ ಸ್ವತಂತ್ರ ಶಾಸಕನಾದ ಟಿಪೂ ಸುಲ್ತಾನನ ದುರಂತ ಎಂದು ಗಿರೀಶ್ ಕಾರ್ನಾಡ್ ಹೇಳುತ್ತಾರೆ. ತನ್ನ ಇಡೀ ಬಾಳನ್ನು ಬಡಿದಾಟದಲ್ಲೇ ನೀಗಿಸಿದ ಈ ವ್ಯಕ್ತಿ ಗುಟ್ಟಾಗಿ ತನ್ನ ಕನಸುಗಳನ್ನು ಬರೆದಿಡುತ್ತಿದ್ದ ಎಂಬ ಮಾತನ್ನು ಏ.ಕೆ.ರಾಮಾನುಜನ್ ಅವರಿಂದ ಕೇಳಿದಂದಿನಿಂದ ನನಗೆ ಟಿಪೂವಿನಿನಲ್ಲಿ ವಿಶೇಷ ಆಸಕ್ತಿ ಉಂಟಾಗಿತ್ತು ಎನ್ನುತ್ತಾರೆ ಕಾರ್ನಾಡ್. ಅದೇ ಈ ನಾಟಕದ ಆರಂಭ ಬಿಂದು ಎಂಬುದು ಅವರ ಅಭಿಪ್ರಾಯ.
Publicatiedatum
12-01-2023

Storyside IN